• 08251 231197
  • vptputtur@yahoo.co.in

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯೋತ್ಸವ.

ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರಿಸುವಂತಹ ಜವಾಬ್ದಾರಿ ನಮ್ಮ ಯುವ ಜನಾಂಗದ ಮೇಲಿದೆ – ಎಂದು  ವಿವೇಕಾನಂದ ಪಾಲಿಟೆಕ್ನಿಕ್ ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಎ.ವಿ.ನಾರಾಯಣ ಇವರು ಹೇಳಿದರು. ಇವರು ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡಿದರು.

ನಾವು 66ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಾ ಇದ್ದೇವೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಾಯಕರು ಈಗ ನಮ್ಮೊಂದಿಗಿಲ್ಲ ಅವರು ಬಹಳಷ್ಟು ಆಶೋತ್ತರಗಳನ್ನು ಇಟ್ಟುಕೊಂಡಿದ್ದರು. ಈ 65 ವರ್ಷಗಳಲ್ಲಿ ನಾವು ಶಿಕ್ಷಣ, ಕೈಗಾರಿಕೆ ಹಾಗೂ ಕೃಷಿ ಕ್ಷೇತ್ರಗಳಲ್ಲಿ ಬಹಳಷ್ಟು ಪ್ರಗತಿಯನ್ನು ಸಾದಿಸಿದ್ದೇವೆ. ನಾವು ಸಾಧಿಸಿದ ಪ್ರಗತಿಯನ್ನು ಮುನ್ನಡೆಸುವ ಜವಾಬ್ದಾರಿ ಮುಂದಿನ ಜನಾಂಗವಾದ ನಿಮ್ಮ ಮೇಲಿದೆ ಎಂದು ಅವರು ತಿಳಿಸಿದರು.

Highslide for Wordpress Plugin