• 08251 231197
  • vptputtur@yahoo.co.in

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಶ್ರೀ ರಾಮ ಪ್ರಾಣ ಪ್ರತಿಷ್ಠಾ ಸಂಭ್ರಮ.

ಪುತ್ತೂರು, ಜ.22: ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಆವರಣದಲ್ಲಿ, ಪದವಿ ಕಾಲೇಜಿನಿಂದ ಹೊರಟ ಶ್ರೀ ರಾಮ ರಥವನ್ನು ಪಾಲಿಟೆಕ್ನಿಕ್ ನಲ್ಲಿ ಆದರ, ಭಕ್ತಿ ಹಾಗು ಸಂಭ್ರಮದಿಂದ ಸ್ವಾಗತಿಸಲಾಯಿತು. ಕಾಲೇಜಿನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಶ್ರೀ ರಾಮನಿಗೆ ಆರತಿ ಬೆಳಗಿ ಕಾಲೇಜಿನ ಸರ್ವತೋಮುಖ ಬೆಳವಣಿಗೆಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್, ಉಪನ್ಯಾಸಕ ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉಪನ್ಯಾಸಕಿಯರಿಂದ ಭಜನೆ, ವಿದ್ಯಾರ್ಥಿಗಳಿಂದ ಕುಣಿತ ಭಜನೆ ಹಾಗೂ ಅಯೋಧ್ಯೆಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಯ ವ್ಯವಸ್ಥೆಯನ್ನೂ ಈ ಸಂದರ್ಭದಲ್ಲಿ ಕಾಲೇಜಿನಲ್ಲಿ ಮಾಡಲಾಯಿತು.

Highslide for Wordpress Plugin