News and Events
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಶ್ರೀ ಮುರಳೀಧರ್.ಯಸ್
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ರವರು ನಿವೃತ್ತಿಗೊಂಡ ಹಿನ್ನಲೆಯಲ್ಲಿ ನೂತನ ಪ್ರಭಾರ ಪ್ರಾಂಶುಪಾಲರಾಗಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಶ್ರೀ ಮುರಳೀಧರ್.ಯಸ್. ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯ್ಕೆ ಮಾಡಿದೆ. ಇವರು ಮೇ.1 ರಂದು ಪ್ರಾಚಾರ್ಯರಾಗಿ ನಿಯುಕ್ತಿಗೊಂಡರು. ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ ಪಾಲಿಟೆಕ್ನಿಕ್ನ ಪ್ರತಿನಿಧಿಯಾದ ಶ್ರೀ ವಾಮನ್ ಪೈ, ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ, ಸದಸ್ಯರುಗಳಾದ ರವಿಮುಂಗ್ಲಿಮನೆ, ಈಶ್ವರಚಂದ್ರ ಹಾಗೂ
ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ಸೇವಾ ನಿವೃತ್ತಿ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ರವರು ನಿವೃತ್ತಿ ಹೊಂದಿದ್ದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ ಅವರಿಗೆ ಶುಭವಿದಾಯ ಕೋರಿ ಶುಭ ಹಾರೈಸಿದರು. 1988 ರಂದು ಉಪನ್ಯಾಸಕರಾಗಿ ಸೇರಿ 2022ನೇ ಮೇ ತಿಂಗಳಲ್ಲಿ ಪ್ರಾಚಾರ್ಯರಾಗಿ ಬಡ್ತಿ ಹೊಂದಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ,ವಿವೇಕಾನಂದ ಪಾಲಿಟೆಕ್ನಿಕ್ನ್ನು ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುವಲ್ಲಿ ಸಹಕಾರಿಯಾಗಿದ್ದರು.
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 29-04-2024 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಡಾ| ಮಹೇಶ್ ಪ್ರಸನ್ನ ಮಾತನಾಡುತ್ತಾ, “ಜೀವನದಲ್ಲಿ ಯಶಸ್ಸು ಸಿಗಬೇಕಾದರೆ 5 ಅಂಶಗಳಿರಬೇಕು ಅವು ಯಾವುದೆಂದರೆ ನಮ್ಮ ನಡವಳಿಕೆ ನಮ್ಮಲ್ಲಿ ನಮಗಿರುವ ನಂಬಿಕೆ, ಸಮಯಪ್ರಜ್ಞೆ, ತಂಡದೊಂದಿಗೆ ಕೆಲಸಮಾಡುವ ಹೊಂದಾಣಿಕೆ, ನಮ್ಮಲ್ಲಿರುವ ಕೌಶಲ್ಯ ಅಭಿವೃದ್ಧಿಗೊಳಿಸುವಿಕೆ, ತನ್ಮೂಲಕ ಹೆಚ್ಚಿನ ಕೌಶಲ್ಯ ಆಭಿವೃದ್ಧಿಯಿಂದ ಬದುಕುವುದು, ಯಾವಾಗಲೂ ಒಳ್ಳೆಯದನ್ನೇ
ಮತದಾರನ ಕರ್ತವ್ಯದ ಬಗ್ಗೆ ಜಾಗೃತಿ
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಇಂದು 22-03-2024ರಂದು ವಿವೇಕಾನಂದ ಇಂಗ್ಲಿಷ್ ಮಾಧ್ಯಮ (central) ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದವರು ಚುನಾವಣಾ ಕರ್ತವ್ಯದ ಬಗ್ಗೆ ಘೋಷಣೆ ಮಾಡಿದರು. ಶಾಲೆಯ ಸ್ಕೌಟ್ಸ್ ಅಧ್ಯಾಪಕಿ ಮಾಹಿತಿ ನೀಡಿದರು. ಪಾಲಿಟೆಕ್ನಿಕ್ ವತಿಯಿಂದ ಅವರಿಗೆ ಸಿಹಿ ಹಂಚಲಾಯಿತು. ಪಾಲಿಟೆಕ್ನಿಕ್ ನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.
ಶ್ರೀ ಗೋಪಿನಾಥ ಶೆಟ್ಟಿಯವರಿಗ ಭಾವಪೂರ್ಣ ಶ್ರದ್ಧಾಂಜಲಿ.
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 1987 ರಿಂದ 1990 ರವರೆಗೆ 3 ವರ್ಷಗಳ ಕಾಲ ಉಪನ್ಯಾಸಕರಾಗಿ ಹಾಗೂ 1990 ರಿಂದ 2022 ರವರೆಗೆ 32 ವರ್ಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸಂಸ್ಥೆಯ ಹಿರಿಮೆಯನ್ನು ಎತ್ತಿಹಿಡಿದ ದಕ್ಷ, ಪ್ರಾಮಾಣಿಕ ಹಾಗೂ ಶಿಸ್ತಿನ ಸಿಪಾಯಿಯಾಗಿದ್ದ ಶ್ರೀ ಗೋಪಿನಾಥ ಶೆಟ್ಟಿಯವರು ಅಕಾಲಿಕವಾಗಿ ದಿನಾಂಕ 13-03-2024ರಂದು ದೈವಾಧೀನರಾದರು. ಅವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘ, ಫಾರ್ಮಸಿ ಕಾಲೇಜು ಹಾಗೂ ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು. ಸಭೆಗೆ ಆಗಮಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ
ಶ್ರದ್ಧಾಂಜಲಿ
ನಮ್ಮ ನೆಚ್ಚಿನ ನಿವೃತ್ತ ಪ್ರಾಂಶುಪಾಲರಾದ ಗೋಪಿನಾಥ್ ಶೆಟ್ಟಿ ಅವರು ನಿಧನರಾಗಿರುತ್ತಾರೆ. ಅವರ ಆತ್ಮಕ್ಕೆ ಸಾಯುಜ್ಯ ದೊರಕಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಓಂ ಶಾಂತಿ.
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದಿನಾಂಕ 10-03-2024ರಂದು ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ನಡೆಸಲಾಯಿತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶ್ರೀ ಕೊಂಕೋಡಿ ಕೃಷ್ಣಭಟ್ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, “ಗ್ರಾಮಾಂತರದಲ್ಲಿ ಶೈಕ್ಷಣಿಕ ಕ್ರಾಂತಿಯ ರೀತಿಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಬೆಳವಣಿಗೆಯಾಗಿದೆ. ವಿವೇಕಾನಂದ ಪಾಲಿಟೆಕ್ನಿಕ್ ನೈಪುಣ್ಯ ಶಿಬಿರ, ಜನೌಷಧಿ ಕೇಂದ್ರಗಳನ್ನು ತೆರೆಯುವುದು ಮುಂತಾದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ. ಗ್ರಾಮದ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಕೇಂದ್ರ ಈ ಸಂಸ್ಥೆಯಿಂದಾಗಬೇಕು. ಈ ರೀತಿ ನಾವು ಎಲ್ಲಾ
Republic Day Celebration
India’s 75th Republic Day was celebrated in Vivekananda Polytechnic, Puttur on 26-01-2024. Flag Hoisting was done by Shri. Ravi Munglimane, Member of the College Management Committee in the presence of Managament Committee President, Shri Vishweshwara Bhat Bangaradka, Correspondent Shri Mahadeva Shastry Manila, Member Shri Ishwarachandra and Principal Shri Chandrakumar. All Staffs and Students
Session on NBA Accreditation
An informative session for the staffs on NBA Accreditation was held at Vivekananda Polytechnic, Puttur by Dr. Manujesh, HOD, Mechanical Engineering, of Vivekananda College of Engineering and Technology on 25-01-2024.
Voters Pledge
Students and Staffs of Vivekananda Polytechnic, Puttur took the Voter’s Pledge on 24-01-2024