• 08251 231197
  • vptputtur@yahoo.co.in

ಪಡ್ಡಾಯೂರು ಗ್ರಾಮದಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ಚಾಲನೆ

ಪುತ್ತೂರು:ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಂತೆ ವಿವೇಕಾನಂದ ಪಾಲಿಟೆಕ್ನಿಕ್‌ನ ವತಿಯಿಂದ ಪಡ್ಡಾಯೂರು ಗ್ರಾಮದೊಲ್ಲೊಂದು ಔಷಧೀಯ ವನ ನಿರ್ಮಾಣಕ್ಕೆ ದಿನಾಂಕ 13-07-2023 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಉದ್ದೇಶವನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡುತ್ತಾ “ಇಲ್ಲಿ ನೆಡುವ ಹಣ್ಣು, ಔಷಧೀಯ ಗಿಡಮರಗಳಿಂದ ಗ್ರಾಮಸ್ಥರು, ಮುಂದಿನ ಪೀಳಿಗೆಯವರು ಹಾಗೂ ಪ್ರಾಣಿ ಪಕ್ಷಿಗಳು ಪ್ರಯೋಜನ ಪಡೆಯುವಂತಾಗಲಿ” ಎಂದು ಹಾರೈಸಿದರು. ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿಮನೆ ಮಾತನಾಡುತ್ತಾ “ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಔಷಧೀಯ ವನದಲ್ಲಿ

Read More

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ‘ವಿವೇಕ ಸಂಜೀವಿನಿ’ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ‘ವಿವೇಕ ಸಂಜೀವಿನಿ’ ಕಾರ್ಯಕ್ರಮದ ಪರಿಕಲ್ಪನೆಯಂತೆ ಕಾಲೇಜು ಆವರಣದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆಗಾಗಿ ಗಿಡಗಳನ್ನು ನೆಟ್ಟು ಬೆಳೆಸುವ ತಯಾರಿ ಕಾರ್ಯಕ್ರಮವು ದಿನಾಂಕ 30-06-2023 ರಂದು ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರತಿಯೊಂದು ಮನೆ ಹಾಗೂ ಗ್ರಾಮಗಳಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸುವ, ಸಂರಕ್ಷಿಸುವ ಆಶಯ ಉದ್ದೇಶಗಳನ್ನು ಮನವಿ ಮಾಡಿ ಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್, ಅಧ್ಯಾಪಕ ಹಾಗೂ ಅಧ್ಯಾಪಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ

ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್‌ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯ ಸಮಾರಂಭ ದಿನಾಂಕ 17-06-2023 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಮಾತನಾಡುತ್ತಾ “ಈಗ ಸಮಾಜವು ನಿಮ್ಮ ತಪ್ಪು ಒಪ್ಪುಗಳನ್ನು ಸ್ವೀಕರಿಸುವ ಸಮಯ. ಇದನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತ ನಾಗರಿಕರಂತೆ ನಡೆದುಕೊಳ್ಳಿ, ನಿಮ್ಮ ಕೌಶಲ್ಯದಿಂದ ನೀವು ಗುರುತಿಸಿಕೊಳ್ಳುವವರಾಗಿ” ಎಂದು ಹಿತವಚನ ನುಡಿದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಜಯಂತಿ ನಾಯಕ್ ಮಾತನಾಡುತ್ತಾ “ಆವಿಷ್ಕಾರಗಳನ್ನು ತಿಳಿದುಕೊಳ್ಳುವ ಸಂಸ್ಕಾರವನ್ನು ಬೆಳೆಸಿಕೊಂಡು, ಕೆಟ್ಟ ಚಟಗಳಿಗೆ ಬಲಿಯಾಗದೆ ಶ್ರದ್ಧೆ, ಪ್ರಾಮಾಣಿಕತೆಯಿಂದ ಬಾಳಿ”

Read More

ವಿವೇಕಾನಂದ ಪಾಲಿಟೆಕ್ನಿಕ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

  ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಮತ್ತು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯ ಬ್ಲಡ್ ಸೆಂಟರ್ ಮಂಗಳೂರು ಇವುಗಳ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17-05-2023 ರಂದು ನಡೆಯಿತು. ಈ ಶಿಬಿರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರುಗಳು, ಶಿಕ್ಷಕ ವೃಂದ, ಸಾರ್ವಜನಿಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸ್ವಯಂಪ್ರೇರಿತ ರಕ್ತದಾನದಲ್ಲಿ ಭಾಗಿಯಾದರು ಹಾಗೂ ಸುಮಾರು 80 ಯುನಿಟ್‌ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.

Read More

ಓಂ ಶಾಂತಿಃ

ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯರು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕರೂ ಆದ ಶ್ರೀ ರಾಧಾಕೃಷ್ಣ ಭಕ್ತ ಇವರ ನಿಧನಕ್ಕೆ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಸಂತಾಪ ಸೂಚಿಸಲಾಯಿತು. ಅವರು ವಿದ್ಯಾವರ್ಧಕ ಸಂಘಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಲಾಯಿತು. ಓಂ ಶಾಂತಿಃ.

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ಉದ್ಯೋಗ ನೈಪುಣ್ಯ ತರಬೇತಿಯ ಸಮಾರೋಪ”

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಹಮ್ಮಿಕೊಂಡ ಒಂದು ವಾರದ ಉದ್ಯೋಗ ನೈಪುಣ್ಯ ತರಬೇತಿಯು ದಿನಾಂಕ 29-04-2023ರಂದು ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ, ಸದಸ್ಯರಾದ ರವಿ ಮುಂಗ್ಲಿಮನೆ ಉಪಸ್ಥಿತರಿದ್ದರು. ಶಿಭಿರಾರ್ಥಿಗಳ ಹಾಗೂ ತರಬೇತುದಾರರನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಸ್ವಾಗತಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ಸೇವೆಯ ರೂಪದಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮದ ಶಿಭಿರಾರ್ಥಿಗಳು ತರಬೇತಿಯನ್ನು ವಿಸ್ತಾರಗೊಳಿಸಿಕೊಂಡು

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಲಘು-ಉದ್ಯೋಗ ಭಾರತಿ ಕಾರ್ಯಕ್ರಮ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನಲ್ಲಿ ಲಘು–ಉದ್ಯೋಗ ಭಾರತಿ ಕರ್ನಾಟಕ  ಇದರ ಪುತ್ತೂರು ಘಟಕದ ವಾರ್ಷಿಕ ದಿನಾಚರಣೆಯನ್ನು ದಿನಾಂಕ 26-04-2023ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಗಾಟಿಸಿದ ಮುಖ್ಯ ಅತಿಥಿಗಳಾದ ಶ್ರೀ ಮಹಾದೇವ ಶಾಸ್ತ್ರಿ, ಸಂಚಾಲಕರು, ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಇವರು ಮಾತನಾಡುತ್ತಾ “ಬೇರೆ ಊರಿಗೆ ಹೋಗಿ ಬೇರೆಯವರ ಕೈಕೆಳಗೆ ಕೆಲಸ ಮಾಡುವುದರ ಬದಲು ನಮ್ಮದೇ ಊರಲ್ಲಿ ಸ್ವಂತ ಉದ್ಯೋಗ ಕೈಗೊಳ್ಳುವಂತೆ ಸಾಧನೆ ಮಾಡಿ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.   ಲಘು–ಉದ್ಯೋಗ ಭಾರತಿ ಕರ್ನಾಟಕ  ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಎಸ್.ಆರ್.ಕೆ.‍ಲ್ಯಾಡರ್ಸ್ ನ ಮಾಲಿಕರಾದ

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕೌಶಲ್ಯ ತರಬೇತಿ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2022-2023ನೇ ಸಾಲಿನ ಶೈಕ್ಷಣಿಕ ವರ್ಷದ ಕೌಶಲ್ಯಾಭಿವ್ರಿದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯದ “ಉದ್ಯೋಗ ನೈಪುಣ್ಯ ತರಬೇತಿ” ಕಾರ್ಯಕ್ರಮ ‍ನಡೆಯಿತು.    ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಖ್ಯ ಅತಿಥಿಗಳಾದ ಶ್ರೀ ಅಚ್ಯುತ ನಾಯಕ್ ಹೆಚ್. ಖಜಾಂಚಿ, ವಿವೇಕಾನಂದ ವಿದ್ಯಾವರ್ಧಕ ಸಂಘ ಇವರು ಮಾತನಾಡುತ್ತಾ ಆತ್ಮನಿರ್ಭರ ಭಾರತದ ಕನಸಿನೊಂದಿಗೆ ಜೋಡಿಸಲ್ಪಟ್ಟ ಈ‍ ಕಾರ್ಯಕ್ರಮದ ಆಶಯದಂತೆ “ನಾವು ನಮ್ಮ ಕಾಲಮೇಲೆ ನಿಂತಾಗ ನಮ್ಮ ಆರ್ಥಿಕ ಸ್ಥಿತಿಯೊಂದಿಗೆ ದೇಶದ ಆರ್ಥಿಕ ಸ್ಥಿತಿಯೂ ಹೆಚ್ಚಿದಂತಾಗುತ್ತದೆ“. ನಿಮಗೆಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು.

Read More

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ಹಾಗೂ ವಕೀಲರ ಸಂಘ (ರಿ). ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ “ಮಾದಕವ್ಯಸನ ಹಾಗೂ ಸಿಗರೇಟು ಉತ್ಪನ್ನಗಳ ಕಾಯಿದೆ” ಹಾಗೂ “ವಿಶ್ವಭೂದಿನ”ದ ಅಂಗವಾಗಿ ಒಂದು ದಿನದ ಕಾನೂನು ಮಾಹಿತಿ ಕಾರ್ಯಾಗಾರವನ್ನು ದಿನಾಂಕ ೧೯/೪/೨೦೨೩ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀ. ಮನೋಹರ್. ಕೆ. ವಿ., ಅಧ್ಯಕ್ಷರು, ವಕೀಲರ ಸಂಘ(ರಿ.) ಪುತ್ತೂರು. ಇವರು ಮಾತನಾಡುತ್ತಾ “ಹದಿಹರೆಯದಲ್ಲಿ ವ್ಯಸನಿಗಳಾಗುವುದು

Read More

ಶ್ರದ್ಧಾಂಜಲಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್‍ ಕಾಲೇಜಿನಲ್ಲಿ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದ ಪುತ್ತೂರಿನ ದರ್ಬೆ ನಿವಾಸಿ ದಿ. ಕುಡ್ಗಿ ಸುಧಾಕರ್ ಶೆಣೈಯವರು ತಮ್ಮ ವಯೋಸಹಜ ಅಸೌಖ್ಯದಿಂದ ಏಪ್ರಿಲ್ 8ರಂದು ದೈವಾಧೀನರಾದರು. ಅಗಲಿದ ಇವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಸಂಚಾಲಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಮೌನಪ್ರಾರ್ಥನೆಯನ್ನು ಸಲ್ಲಿಸಿ ಪ್ರಾರ್ಥಿಸಿದರು.

Read More

Highslide for Wordpress Plugin