• 08251 231197
  • vptputtur@yahoo.co.in

ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ದಿನಾಂಕ 11-09-2022 ರಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್‍ಯಕ್ರಮದಲ್ಲಿ ಸುಮಾರು 200 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದೀಪ ಬೆಳಗಿಸಿ ಕಾರ್‍ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ ಹಿರಿಯ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ, ಇದೊಂದು ಸೌಹಾರ್ದ ಬೆಸೆಯುವ ಕಾರ್‍ಯಕ್ರಮ. ನಾವೆಲ್ಲರೂ ಒಟ್ಟಾಗಿ ಈ ಸಂಸ್ಥೆಯನ್ನು ಇನ್ನೂ ಎತ್ತರಕ್ಕೆ ಬೆಳೆಸೋಣ ಎಂದು ಶುಭ ನುಡಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ದೇವಿಪ್ರಸಾದ್ ಇವರು ದೇಣಿಗೆಯಾಗಿ

Read More

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ (2021-22) ವಿದಾಯಕೂಟ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಭ ವಿದಾಯ ಕಾರ್ಯಕ್ರಮವನ್ನು ನಡೆಸಲಾಯಿತು. ಭಾರತ ಮಾತೆಗೆ ಪುಷ್ಪಾರ್ಚನೆ ಗೈಯುವ ಮೂಲಕ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಭಟ್ ಕೊಂಕೋಡಿ ಮಾತನಾಡುತ್ತಾ, ಮೊಟ್ಟೆಯಿಂದ ಹೊರಬಂದ ಮರಿ ಹೇಗೆ ತನ್ನಷ್ಟಕ್ಕೆ ತಾನೇ ಬದುಕಲು ಕಲಿಯುತ್ತದೋ ಹಾಗೆ ಜೀವನದ ಸವಾಲುಗಳನ್ನು ಎದುರಿಸಿ ಯಶಸ್ಸಿನ ಮೆಟ್ಟಲುಗಳನ್ನು ಏರುವುದು ಹೇಗೆ ಎಂಬುದನ್ನು ನೀವು ಕಲಿಯಬೇಕಾಗಿದೆ. ಸೋಲಿನಿಂದ ಗೆಲುವಿನ ಮೆಟ್ಟಲುಗಳನ್ನು ಕಟ್ಟಿಕೊಳ್ಳಬೇಕು ಎನ್ನುವ ಪೇರಣೆ

Read More

Flag Hoisting and Independence day celebrations

Flag Hoisting and Independence day celebrations at Vivekananda Polytechnic, Puttur.  

Read More

75 ವರ್ಷದ ಸ್ವಾತಂತ್ರ್ಯ ಸಂಭ್ರಮ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 75 ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಧ್ವಜಾರೋಹಣವನ್ನು ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಯವರು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಾತಂತ್ರ್ಯ ಸಂಭ್ರಮದ ಹಿಂದಿನ ಕಷ್ಟ ನಷ್ಟಗಳನ್ನು, ಬಲಿದಾನಗಳನ್ನು ನೆನಪಿಸಿದರು. ಹಾಗೂ ಮುಂದಿನ ಪೀಳಿಗೆಯವರಾದ ವಿದ್ಯಾರ್ಥಿಗಳು ಅವರ ಶ್ರಮವನ್ನು ಸಾರ್ಥಕಗೊಳಿಸಿ ಎಂದರು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸದಸ್ಯರಾದ ರವಿ ಮುಂಗ್ಲಿಮನೆ, ಈಶ್ವರಚಂದ್ರ, ಪ್ರಾಚರ್ಯರು, ಶಿಕ್ಷಕ, ಶಿಕ್ಷಕೇತರ ವರ್ಗದವರು ಮತ್ತು

Read More

ಅಮೃತ ಮಹೋತ್ಸವದ ಸಂದೇಶ ಹಾಗೂ ರಕ್ಷಾ ಬಂಧನ ಕಾರ್‍ಯಕ್ರಮ

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಅಮೃತ ಮಹೋತ್ಸವದ ಸಂದೇಶ ಹಾಗೂ ರಕ್ಷಾ ಬಂಧನ ಕಾರ್‍ಯಕ್ರಮ ಆಚರಿಸಲಾಯಿತು. ದಿಕ್ಸೂಚಿ ಭಾಷಣವನ್ನು ಮಾಡಿದ ಶ್ರೀರಂಗ ಶಾಸ್ತ್ರಿ, ನಿವೃತ್ತ ಸೈನಿಕರು, ಭಾರತೀಯ ನೌಕದಳ ಇವರು ಮಾತನಾಡುತ್ತಾ, ಉತ್ತಮ ನಾಗರಿಕನಾಗಿ ರೂಪುಗೊಳ್ಳುವಲ್ಲಿ ಶಿಸ್ತು ಮುಖ್ಯ. ಸಂಯಮ, ಬದ್ಧತೆ, ಸಮಯಪರಿಪಾಲನೆ, ಜವಾಬ್ದಾರಿಯನ್ನು ಪೂರ್ಣಗೊಳಿಸುವುದು. ಸಹಾಯಹಸ್ತ ನೀಡುವುದು, ಪ್ರಾಮಾಣಿಕ ಶುದ್ಧ ಹಸ್ತರಾಗಿರುವುದು ನಮ್ಮ ಜವಾಬ್ದಾರಿ. ರಾಷ್ಟ್ರಪ್ರೇಮ ಹಾಗೂ ಸ್ವಚ್ಛ ಭಾರತಕ್ಕೆ ನಮ್ಮ ಕೊಡುಗೆ ಸದಾ ಇರಬೇಕು ಎಂದು ಯುವ ಪೀಳಗೆಯಲ್ಲಿ ದೇಶಭಕ್ತಿಯನ್ನು ಉದ್ದೀಪನಗೊಳಿಸುವ

Read More

ಆಟಿ ಉತ್ಸವ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್­ನಲ್ಲಿ ಆಟಿ ಉತ್ಸವವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಈ ಕಾರ್ಯಕ್ರಮವನ್ನು ಸಂಪ್ರಾದಾಯಿಕ ರೀತಿಯಲ್ಲಿ ಉದ್ಘಾಟಿಸಿದ ತುಳು ಅಕಾಡಮಿಯ ಅಧ್ಯಕ್ಷರಾದ ಶ್ರೀ ದಯಾನಂದ ಕತ್ತಲ್‌ಸಾರ್ ಮಾತನಾಡುತ್ತಾ, ಆಟಿ ತಿಂಗಳ ಪದ್ಧತಿಗಳನ್ನು ವಿವರಿಸುತ್ತಾ ಕಷ್ಟದ ತಿಂಗಳಾದ ಆಟಿ ತಿಂಗಳನ್ನು ಉತ್ಸವವೆಂಬಂತೆ ಆಚರಿಸಲಾಗುತ್ತಿದೆ. ಓಂಕಾರದ ಮೂಲಕ ಜಗತ್ತಿಗೆ ತಾಕತ್ತನ್ನು ತೋರಿಸಿಕೊಟ್ಟು ಭಾರತ ಎಂಬ ಹೆಸರಿನಿಂದ ಕರೆಯಲ್ಪಡುವ ನಮ್ಮ ದೇಶದಲ್ಲಿ ಸ್ವಾಸ್ಥ್ಯ ಸಮಾಜ, ಸ್ವಸ್ಥ ಮನಸ್ಸು ನಿರ್ಮಾಣವಾಗಬೇಕಾದರೆ ದುಶ್ಚಟಮುಕ್ತವಾದ ದುಕು ನಮ್ಮದಾಗಬೇಕು. ನಿಮ್ಮನ್ನು ನೀವು ಶಚಿ ಮಾಡಿಕೊಂಡಾಗ ಇಡೀ ದೇಶವೇ

Read More

ಪೂಲ್ ಕ್ಯಾಂಪಸ್ ನೇಮಕಾತಿ

ಪುತ್ತೂರು: ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಶಾಖೆಯನ್ನು ಹೊಂದಿರುವ ಭಾರತದ ಪ್ರತಿಷ್ಠಿತ ಸಂಸ್ಥೆಯಾದ ’TAFE-EPD’ ವತಿಯಿಂದ ವಿವೇಕಾನಂದ ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನಡೆಸಲಾಯಿತು. ಇದರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಹಾಗೂ ಸುತ್ತಮುತ್ತಲಿನ ಪಾಲಿಟೆಕ್ನಿಕ್‌ಗಳಾದ ಕೆವಿಜಿ ಪಾಲಿಟೆಕ್ನಿಕ್ ಸುಳ್ಯ, PA ಪಾಲಿಟೆಕ್ನಿಕ್, ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ, ವಿವೇಕಾನಂದ ಪದವಿ ಕಾಲೇಜು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜುಗಳಿಂದ ಬಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಸುಮಾರು 100 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ’TAFE-EPD’ ಯ ಹೆಚ್.ಆರ್. ಅಡ್ಮಿನ್

Read More

ಸ್ವಯಂಪ್ರೇರಿತ ರಕ್ತದಾನ ಶಿಬಿರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಯುವ ರೆಡ್‌ಕ್ರಾಸ್ ಘಟಕ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಇದರ ಸಹಯೋಗದಲ್ಲಿ ದಿನಾಂಕ 15-7-2022 ರಂದು ಸುಮಾರು 70 ವಿದ್ಯಾರ್ಥಿಗಳಿಂದ ಸ್ವಯಂಪ್ರೇರಿತ ರಕ್ತದಾನ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ವಿವೇಕಾನಂದ ಪಾಲಿಟೆಕ್ನಿಕ್‌ನ ಆಡಳಿತ ಮಂಡಳಿ ನಿರ್ದೇಶಕರಾದ ಉಷಾ ಭಟ್ ಮುಳಿಯ ಮಾತನಾಡುತ್ತಾ, ರಕ್ತದಾನ ಅತೀ ದೊಡ್ಡ ದಾನ ಹಾಗೂ ಅತೀ ಶ್ರೇಷ್ಠ ದಾನ. ರಕ್ತದಾನ ಮಾಡಿದ ಎಲ್ಲರಿಗೂ ಶುಭವಾಗಲಿ

Read More

ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಆಡಳಿತ ಮಂಡಳಿ, ಶಿಕ್ಷಕ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ವಿದ್ಯಾ ಸಂಸ್ಥೆಯ 4 ಸ್ಥಂಭಗಳಿದ್ದಂತೆ -ಪ್ರೊ. ವಿ.ಜಿ.ಭಟ್ ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನ ಪ್ರಥಮ ವರ್ಷದ ತರಗತಿಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಗಣಪತಿ ಹೋಮ ಹಾಗೂ ಸರಸ್ವತಿ ಆರಾಧನ ಕಾರ್ಯಕ್ರಮದೊಂದಿಗೆ ಜುಲೈ 11 ರಂದು ನಡೆಸಲಾಯಿತು, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೇಶವಸಂಕಲ್ಪ ಸಭಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಭಾರತಮಾತೆಗೆ ಪುಷ್ಪಾರ್ಚನೆ ಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ವಿವೇಕಾನಂದ

Read More

ವಿಶ್ವ ಯೋಗ ದಿನಾಚರಣೆ

ವಿಶ್ವಯೋಗ ದಿನದಂದು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಸಾಮೂಹಿಕವಾಗಿ ಯೋಗಾಭ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಪಾಲಿಟೆಕ್ನಿಕ್‌ನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಯವರು ಭಾಗವಹಿಸುತ್ತಾ ಯೋಗದಿಂದ ಆರೋಗ್ಯ. ಯೋಗವು ನಮ್ಮನ್ನು ನಾವೇ ತಿಳಿದುಕೊಳ್ಳುವ ಸಾಧನ. ಆದ್ದರಿಂದ ಎಲ್ಲರೂ ಯೋಗಾಭ್ಯಾಸವನ್ನು ನಿತ್ಯವೂ ಮಾಡಿ ಸದೃಢರಾಗಿ ಎಂದು ಹಿತವಚನ ನುಡಿದರು. ಈ ಕಾರ್‍ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಈಶ್ವರಚಂದ್ರ ಭಾಗವಹಿಸಿದ್ದರು. ಸಿವಿಲ್ ವಿಭಾಗದ ಮುಖ್ಯಸ್ಥರಾದ ರವಿರಾಮ ಎಸ್. ಕಾರ್ಯಕ್ರಮದ ನಿರ್ವಹಣೆ ಮಾಡಿದರು. ಪ್ರಾಂಶುಪಾಲರಾದ ಶ್ರೀ ಚಂದ್ರಕುಮಾರ್ ಯೋಗ ದಿನದ ಮಹತ್ವವನ್ನು ತಿಳಿಸಿ

Read More

Highslide for Wordpress Plugin