News and Events
ವಿವೇಕ ಸಂಜೀವಿನಿ ಹಸಿರು ಕ್ಯಾಂಪಸ್ ಅಭಿಯಾನ
ವಿವೇಕ ಸಂಜೀವಿನಿ ಹಸಿರು ಕ್ಯಾಂಪಸ್ ಅಭಿಯಾನದ ಮುಂದುವರೆದ ಕಾರ್ಯವಾಗಿ ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಂದ ನೆಹರುನಗರದ ಕ್ಯಾಂಪಸ್ನಲ್ಲಿ ಮತ್ತಷ್ಟು ಗಿಡಗಳನ್ನು ಇಂದು – 29-07-2024ರಂದು ನೆಡಲಾಯಿತು.
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿದ್ಯಾರ್ಥಿ ಸಂಘದ ರಚನೆ.
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳ ಆಯ್ಕೆಯನ್ನು ದಿನಾಂಕ 26-07-2024 ರಂದು ನಡೆಸಲಾಯಿತು. ಕಾಲೇಜಿನ ತರಗತಿಗಳ ಪ್ರತಿನಿಧಿಗಳ ಆಯ್ಕೆಯ ನಂತರ ನಡೆಸಿದ ವಿದ್ಯಾರ್ಥಿ ಸಂಘದ ರಚನೆಯಲ್ಲಿ ನಾಯಕನಾಗಿ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಂಶಿಕ್. ಜಿ.ಕೆ, ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಸಿವಿಲ್ ವಿಭಾಗದ ಹೃತ್ವಿಕ್.ಪಿ.ಸಿ, ಸಾಂಸ್ಕೃತಿಕ ಹಾಗೂ ಸ್ಪರ್ಧಾ ವಿಭಾಗದ ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ಸುಮನ್ .ಡಿ, ಆಯುಧಪೂಜ ಕಾರ್ಯದರ್ಶಿಯಾಗಿ ಅಂತಿಮ ವರ್ಷದ ಆಟೋಮೊಬೈಲ್ ವಿಭಾಗದ ವರ್ಷಿತ್.ಬಿ.,
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವಿವೇಕ ಸಂಜೀವಿನಿ ಅಭಿಯಾನ:
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ವಿದ್ಯಾಸಂಸ್ಥೆಗಳಲ್ಲೊಂದಾದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಅವರಣದಲ್ಲಿ “ವಿವೇಕ ಸಂಜೀವಿನಿ ಹಸಿರು ಕ್ಯಾಂಪಸ್ ಅಭಿಯಾನ ‘’ ಕಾರ್ಯಕ್ರಮದ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರವಿಮುಂಗ್ಲಿಮನೆ , ಶ್ರೀ ಈಶ್ವರಚಂದ್ರ ಹಾಗೂ ಶ್ರೀಮತಿ ಜಯಂತಿ ನಾಯಕ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಮ್ಮ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಮುರಳೀಧರ್ . ಯಸ್ ಶಿಕ್ಷಕ ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಹಕರಿಸಿದರು.
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ವನಮಹೋತ್ಸವ.
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ನಲಿ ದಿನಾಂಕ 10-07-2024 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ಥಾಪನಾದಿನದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹದೇವ ಶಾಸ್ತ್ರಿ, ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ, ಪ್ರಾಂಶುಪಾಲರು, ಸಿಬ್ಬಂದಿವರ್ಗ ಹಾಗು ಅಂತಿಮ ವರ್ಷದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಂಪ್ಯೂಟರ್ ಸೈನ್ಸನ ವಿದ್ಯಾರ್ಥಿ ಪ್ರಜ್ವಲ್ ಕುಮಾರ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ
“ಸೋಲನ್ನು ಕೂಡಾ ಗೆಲುವಿನ ಮೆಟ್ಟಲಾಗಿಸಿ ಮುನ್ನಡೆಯುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು”- ಶ್ರೀಮತಿ ವಸಂತಿ.ಕೆ ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ತರಗತಿಗಳ ಪ್ರಾರಂಭೋತ್ಸವ ದಿನಾಂಕ 08-07-2024 ರಂದು ಗಣಪತಿಹೋಮ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಂಡಿತು. ಪೂಜಾ ಕಾರ್ಯಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆಗೈದು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಅಧ್ಯಕ್ಷರಾದ ಶ್ರೀಮತಿ ವಸಂತಿ.ಕೆ. ರವರು ಮಾತನಾಡುತ್ತಾ “ವಿದ್ಯೆ ಎಂಬುದು ಬೇರೆ ಯಾರಿಗೂ ನಮ್ಮಿಂದ ಕಸಿದುಕೊಳ್ಳಲಾಗದಂತಹ ಅಮೂಲ್ಯ ಸಂಪತ್ತು. ಸೋಲನ್ನು ಕೂಡಾ ಗೆಲುವಿನ ಮೆಟ್ಟಲಾಗಿಸಿ ಮುನ್ನಡೆಯುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು, ಸಂಶೋಧನೆಗೆ ನಮ್ಮನ್ನು ನಾವು ಪ್ರೇರೇಪಿಸಿಕೊಳ್ಳಬೇಕು. ನಿಮ್ಮ ಮುಂದಿನ ಅಧ್ಯಯನ ಹೆಚ್ಚು ಪರಿಣಾಮಕಾರಿಯಾಗಿ ಉಜ್ವಲ ಭವಿಷ್ಯವನ್ನು ರೂಪಿಸುವಂತಾಗಲಿ” ಎಂದು ಹರಸಿ
Technical Seminar
Technical seminar under Neev Abhiyan by Engineers of Ambuja Cement at Vivekananda Polytechnic, Puttur for our students and contractors on 04/07/2024. Topics : Cement manufacturing, Reasons for failure of structure, Methods to be followed during construction.
ಶ್ರದ್ಧಾಂಜಲಿ
ಪುತ್ತೂರು:ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 1998 ರಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಎಲ್.ಎನ್. ಕುಡೂರು (66)ರವರು ದಿನಾಂಕ 30/06/2024 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ವಿಟ್ಲದ ಜೆ.ಸಿ. ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾಗಿದ್ದು, ವಿಠಲ ಶೈಕ್ಷಣಿಕ ಸಂಸ್ಥೆಗಳ ಸಂಚಾಲಕರಾಗಿ, ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾಗಿಯೂ, ಜೆಸಿಐ ಇಂಡಿಯಾದ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಆಗಿಯೂ ಸೇವೆ ಸಲ್ಲಿಸಿರುತ್ತಾರೆ. ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸಿದ್ದಾರೆ. ಸಮಾಜಮುಖಿ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರ ಬಗ್ಗೆ
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಶ್ರೀ ಧರಣಪ್ಪ ಗೌಡರಿಗೆ ಸೇವಾ ನಿವೃತ್ತಿ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ 1992 ರಿಂದ 2024 ರವರೆಗೆ ಪರಿಚಾರಕರಾಗಿ 32 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಶ್ರೀ ಧರಣಪ್ಪ ಗೌಡರನ್ನು ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗ ಅವರಿಗೆ ಶುಭವಿದಾಯ ಕೋರಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ ಮಣಿಲ ಹಾಗೂ ಸಹೋದ್ಯೋಗಿ ಬಂಧುಮಿತ್ರರು ಅವರ ನಿವೃತ್ತ ಜೀವನವು ಸುಖ ಶಾಂತಿ, ನೆಮ್ಮದಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಶ್ರೀ ಮುರಳೀಧರ್.ಯಸ್
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ರವರು ನಿವೃತ್ತಿಗೊಂಡ ಹಿನ್ನಲೆಯಲ್ಲಿ ನೂತನ ಪ್ರಭಾರ ಪ್ರಾಂಶುಪಾಲರಾಗಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾದ ಶ್ರೀ ಮುರಳೀಧರ್.ಯಸ್. ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯ್ಕೆ ಮಾಡಿದೆ. ಇವರು ಮೇ.1 ರಂದು ಪ್ರಾಚಾರ್ಯರಾಗಿ ನಿಯುಕ್ತಿಗೊಂಡರು. ಈ ಸಂದರ್ಭದಲ್ಲಿ ವಿದ್ಯಾವರ್ಧಕ ಸಂಘದ ಪಾಲಿಟೆಕ್ನಿಕ್ನ ಪ್ರತಿನಿಧಿಯಾದ ಶ್ರೀ ವಾಮನ್ ಪೈ, ಪಾಲಿಟೆಕ್ನಿಕ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿ, ಸದಸ್ಯರುಗಳಾದ ರವಿಮುಂಗ್ಲಿಮನೆ, ಈಶ್ವರಚಂದ್ರ ಹಾಗೂ
ವಿವೇಕಾನಂದ ಪಾಲಿಟೆಕ್ನಿಕ್ ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ಸೇವಾ ನಿವೃತ್ತಿ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರತಿಷ್ಥಿತ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನ ಪ್ರಾಂಶುಪಾಲರು ಶ್ರೀ ಚಂದ್ರಕುಮಾರ್ ರವರು ನಿವೃತ್ತಿ ಹೊಂದಿದ್ದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ ಅವರಿಗೆ ಶುಭವಿದಾಯ ಕೋರಿ ಶುಭ ಹಾರೈಸಿದರು. 1988 ರಂದು ಉಪನ್ಯಾಸಕರಾಗಿ ಸೇರಿ 2022ನೇ ಮೇ ತಿಂಗಳಲ್ಲಿ ಪ್ರಾಚಾರ್ಯರಾಗಿ ಬಡ್ತಿ ಹೊಂದಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ,ವಿವೇಕಾನಂದ ಪಾಲಿಟೆಕ್ನಿಕ್ನ್ನು ಮಾದರಿ ಸಂಸ್ಥೆಯಾಗಿ ರೂಪುಗೊಳ್ಳುವಲ್ಲಿ ಸಹಕಾರಿಯಾಗಿದ್ದರು.